ADVERTISEMENT

ಸತ್ಯಂ ಪ್ರಕರಣ: ಸಮಯ ಕೋರಿ ಸಿಬಿಐ ಮನವಿ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2011, 19:30 IST
Last Updated 18 ಸೆಪ್ಟೆಂಬರ್ 2011, 19:30 IST

ನವದೆಹಲಿ, (ಪಿಟಿಐ): ಬಹುಕೋಟಿ ಸತ್ಯಂ ಹಗರಣದ ಆಪಾದಿತರಾದ ಬಿ. ರಾಮಲಿಂಗ ರಾಜು ಮತ್ತು ಇತರ 9 ಮಂದಿಯ ವಿರ‌್ಧುದ ವಿಚಾರಣಾ ಪ್ರಕ್ರಿಯೆಯನ್ನು ಪೂರ್ತಿಗೊಳಿಸಲು ಇನ್ನೂ ಕಾಲಾವಕಾಶ ಬೇಕು ಎಂದು ಸಿಬಿಐ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದೆ.

ಈ ಕುರಿತು ಮಧ್ಯಂತರ ಅರ್ಜಿ ಸಲ್ಲಿಸಿರುವ ಸಿಬಿಐ, ಅಕ್ಟೋಬರ್ ಅಂತ್ಯದವರೆಗೆ ಕಾಲಾವಕಾಶ ನೀಡಬೇಕು ಎಂದು ಕೋರಿದೆ. ರಾಮಲಿಂಗ ರಾಜು ಅವರ ಜಾಮೀನನ್ನು ರದ್ದುಪಡಿಸಿದ ನಂತರ ವಿಚಾರಣಾ ಪ್ರಕ್ರಿಯೆಯನ್ನು ಜುಲೈ ಅಂತ್ಯದ ವೇಳೆಗೆ ಮುಕ್ತಾಯಗೊಳಿಸಬೇಕು ಎಂದು ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.