ಜೋಧಪುರ: 20 ವರ್ಷಗಳ ಹಿಂದಿನ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಐದು ವರ್ಷ ಜೈಲು ಶಿಕ್ಷೆಗೆ ಒಳಗಾದ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಜೋಧಪುರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ.
ಸಲ್ಮಾನ್ ಖಾನ್ ಮತ್ತು ಅವರ ಮೇಲೆ ಹಣ ಹೂಡಿದ್ದ ಬಾಲಿವುಡ್ ಮಂದಿ ಸದ್ಯಕ್ಕೆ ನಿರಾಳರಾಗಿದ್ದಾರೆ. ಜಾಮೀನು ಆದೇಶ ಪ್ರತಿ ದೊರೆಯು
ತ್ತಲೇ ಸಂಜೆ ಜೋಧಪುರ ಜೈಲಿನಿಂದ ಹೊರಬಂದ 52 ವರ್ಷದ ಸಲ್ಮಾನ್, ಪೊಲೀಸರ ಬಿಗಿ ಭದ್ರತೆಯಲ್ಲಿ ವಿಮಾನ ನಿಲ್ದಾಣಕ್ಕೆ ತೆರಳಿದರು. ಅಲ್ಲಿಂದ ಅವರು ನೇರವಾಗಿ ಮುಂಬೈಗೆ ತೆರಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.