ರಾಯ್ಪುರ (ಐಎಎನ್ಎಸ್): ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಮಾನಸಿಕ ಅಸ್ವಸ್ಥ ಯೋಧನೊಬ್ಬ ತನ್ನ ಸಹೋದ್ಯೋಗಿಗಳತ್ತ ಮನಬಂದಂತೆ ಗುಂಡು ಹಾರಿಸಿದ್ದರಿಂದ ನಾಲ್ವರು ಯೋಧರು ಸಾವನ್ನಪ್ಪಿದ ಘಟನೆ ಛತ್ತೀಸ್ಗಡದಲ್ಲಿ ನಡೆದಿದೆ.
ದಾಂತೇವಾಡ ಸಮೀಪದ ಅರನ್ಪುರ ಗ್ರಾಮ ಬಳಿಯ ಸಿಆರ್ಪಿಎಫ್ ಕ್ಯಾಂಪ್ನಲ್ಲಿ ಸೋಮವಾರ ಮಧ್ಯರಾತ್ರಿ ನಡೆದ ಈ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಮತ್ತೊಬ್ಬ ಯೋಧ ಆಸ್ಪತ್ರೆಯಲ್ಲಿ ಸಾವು, ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ.
ಆರೋಪಿ ದೀಪ್ ಕುಮಾರ್ ತಿವಾರಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಗುಂಡು ಹಾರಿಸಲು ನಿಖರವಾದ ಕಾರಣಗಳೇನೆಂದು ತಿಳಿದುಬಂದಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.