ADVERTISEMENT

ಸಾಯಿ ಪ್ರಕರಣ: ಲಂಚಕ್ಕೆ ಇರಿಸಿದ್ದ ರೂ.5 ಕೋಟಿ ವಶ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2013, 19:30 IST
Last Updated 13 ಡಿಸೆಂಬರ್ 2013, 19:30 IST

ಸೂರತ್‌ (ಪಿಟಿಐ): ಪೊಲೀಸರು ಮತ್ತು ಇತರ ಅಧಿಕಾರಿಗಳಿಗೆ ಲಂಚ ನೀಡಲು ಯತ್ನಿಸಿದ ಆರೋಪದಲ್ಲಿ ಒಬ್ಬ ಸಬ್‌ ಇನ್ಸ್‌ಪೆಕ್ಟರ್‌ ಮತ್ತು ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ಪುತ್ರ ನಾರಾಯಣ್‌ ಸಾಯಿಯ ಐವರು ಸಹಚರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸಾಯಿ ವಿರುದ್ಧದ ಲೈಂಗಿಕ ಹಲ್ಲೆ ಪ್ರಕರಣವನ್ನು ದುರ್ಬಲಗೊಳಿ­ಸುವುದಕ್ಕಾಗಿ ಲಂಚ ನೀಡಲು ಯತ್ನಿಸಿದ ಆರೋಪ ಇವರ ಮೇಲಿದೆ. ಇವರಿಂದ ಐದು ಕೋಟಿ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅಪರಾಧ ಪತ್ತೆ ದಳದ ಸಬ್‌ ಇನ್ಸ್‌ಪೆಕ್ಟರ್‌ ಸಿ.ಕೆ. ಕುಂಭಾನಿ ಪ್ರಕರಣವನ್ನು ದುರ್ಬಲಗೊಳಿಸಲು ಹಣಕ್ಕೆ ಬೇಡಿಕೆ ಇರಿಸಿದ್ದ ಮತ್ತು ಇತರ ಪೊಲೀಸರು, ವೈದ್ಯರು ಹಾಗೂ ನ್ಯಾಯಾಧೀಶರಿಗೆ ತಾನೇ ಹಂಚುವುದಾಗಿ ಹೇಳಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.