ADVERTISEMENT

ಸಾಲಬಾಧೆ: ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2014, 19:30 IST
Last Updated 2 ಏಪ್ರಿಲ್ 2014, 19:30 IST

ನಾಸಿಕ್‌(ಮಹಾರಾಷ್ಟ್ರ): ಈಚೆಗೆ ಸುರಿದ ಅಕಾಲಿಕ ಮಳೆ­ಯಿಂದಾಗಿ ಬೆಳೆ ಹಾನಿಯಾಗಿದ್ದು, ಸಾಲ ಮರುಪಾವತಿ ಮಾಡಲು ಆಗುವುದಿಲ್ಲ ಎಂದು ರೈತರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಸತಾನಾ ಹೋಬಳಿಯ ಪಿಂಗಳವಾಡಿಯಲ್ಲಿ ಮಂಗಳವಾರ ನಡೆದಿದೆ.

‘ಮೃತರನ್ನು ಚಾಬು ಮೋಹನ್‌ ಭಾಮ್ರೆ(63) ಎಂದು ಗುರುತಿಸಲಾಗಿದೆ. ಇವರು ಸುಮಾರು ₨ 9 ಲಕ್ಷ ಸಾಲ ಮಾಡಿಕೊಂಡಿದ್ದರು. ಅಕಾಲಿಕ ಮಳೆಯಿಂದಾಗಿ ಇವರು ಬೆಳೆದಿದ್ದ ಬೆಳೆ ಸಂಪೂರ್ಣವಾಗಿ ನಾಶವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.