ADVERTISEMENT

ಸಿಆರ್‌ಪಿಎಫ್‌ ಯೋಧ ಹುತಾತ್ಮ

ಪಿಟಿಐ
Published 12 ಮೇ 2018, 19:30 IST
Last Updated 12 ಮೇ 2018, 19:30 IST

ಶ್ರೀನಗರ: ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಶುಕ್ರವಾರ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್‌) ಒಬ್ಬ ಯೋಧ ಹುತಾತ್ಮನಾಗಿದ್ದು, ಒಬ್ಬ ನಾಗರಿಕ ಗಾಯಗೊಂಡಿದ್ದಾರೆ.

ಪುಲ್ವಾಮಾ ಜಿಲ್ಲೆಯ ಚಿನಾರ್‌ ಬಾಗ್‌ನ ಮನೆಯೊಂದರಲ್ಲಿ ಉಗ್ರರು ಇರುವ ಮಾಹಿತಿ ಪಡೆದ ಭದ್ರತಾ ಪಡೆಗಳು, ಅಲ್ಲಿಗೆ ತೆರಳಿ ಶೋಧ ಕಾರ್ಯಾಚರಣೆ ನಡೆಸಿದ್ದವು.

‘ಶಂಕಿತ ಉಗ್ರರು ಇದ್ದ ಮನೆ ಬಳಿ ಹೋಗುತ್ತಿದ್ದಂತೆಯೇ, ಅವಿತಿದ್ದ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದರು. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಸಿಆರ್‌ಪಿಎಫ್‌ ಯೋಧ ಮನ್‌ದೀಪ್‌ ಕುಮಾರ್‌ ಹುತಾತ್ಮರಾಗಿದ್ದಾರೆ. ಮನೆ ಮಾಲೀಕ ಬಷೀರ್ ಅಹ್ಮದ್ ಗಾಯಗೊಂಡಿದ್ದಾರೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉಗ್ರರು ಪರಾರಿಯಾಗಿದ್ದು, ಶೋಧ ಕಾರ್ಯಾಚರಣೆ ನಿಲ್ಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.