ADVERTISEMENT

ಸಿಎಂಸಿ ಸಭೆ: ಮತ್ತೆ ನೀರು ಬಿಡಲು ಕರ್ನಾಟಕ ನಕಾರ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2012, 10:40 IST
Last Updated 11 ಅಕ್ಟೋಬರ್ 2012, 10:40 IST

ನವದೆಹಲಿ: `ಕಾವೇರಿ ನದಿ ಪ್ರಾಧಿಕಾರ~ (ಸಿಆರ್‌ಎ) ನಿರ್ದೇಶನ ಪುನರ್ ಪರಿಶೀಲಿಸಬೇಕೆಂದು ಕೋರಿ ಕರ್ನಾಟಕ ಸಲ್ಲಿಸಿರುವ ಮೇಲ್ಮನವಿ ಅರ್ಜಿ ಪರಿಶೀಲಿಸಲು ಗುರುವಾರ ನಡೆದ `ಕಾವೇರಿ ಉಸ್ತುವಾರಿ ಸಮಿತಿ~ (ಸಿಎಂಸಿ) ಸಭೆಯಲ್ಲಿ ಅಕ್ಟೋಬರ್ 15ರಿಂದ 31ರವರೆಗೆ ತಮಿಳುನಾಡಿಗೆ ಪ್ರತಿನಿತ್ಯ 8.75 ಟಿಎಂಸಿ ನೀರು ಬಿಡುಗಡೆ ಮಾಡಬೇಕೆಂಬ ಸಿಎಂಸಿ ಸೂಚನೆಗೆ ಕರ್ನಾಟಕ ನೀರು ಬಿಡಲು ಸಾಧ್ಯವಿಲ್ಲ ಎಂದು ಹೇಳಿತು.

ಕೇಂದ್ರ ಜಲ ಸಂಪನ್ಮೂಲ ಕಾರ್ಯದರ್ಶಿ ಡಿ.ವಿ. ಸಿಂಗ್ ನೇತೃತ್ವದಲ್ಲಿ ಗುರುವಾರ ಮಧ್ಯಾಹ್ನ ನಡೆದ ಸಿಎಂಸಿ ಸಭೆಯಲ್ಲಿ ಕರ್ನಾಟಕದ ಪರ ಹಾಜರಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್ ಅವರು ಅಕ್ಟೋಬರ್ 15ರಿಂದ 31ರವರೆಗೆ ತಮಿಳುನಾಡಿಗೆ ಪ್ರತಿನಿತ್ಯ 8.75 ಟಿಎಂಸಿ ನೀರು ಬಿಡುಗಡೆ ಮಾಡಬೇಕೆಂಬ ಸಿಂಗ್ ಅವರ ಸೂಚನೆಗೆ ರಾಜ್ಯದಿಂದ ತಮಿಳುನಾಡಿಗೆ ಮತ್ತೆ ನೀರು ಹರಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.  

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.