ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್ಇ) 12ನೇ ತರಗತಿಯ ಅರ್ಥಶಾಸ್ತ್ರ ಮರು ಪರೀಕ್ಷೆಯನ್ನು ಬುಧವಾರ ನಡೆಸಲಿದೆ.
ಒಂದು ತಿಂಗಳ ಹಿಂದೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ದೇಶದಾದ್ಯಂತ ಗೊಂದಲ ಸೃಷ್ಟಿಯಾಗಿತ್ತು. ಹೀಗಾಗಿ ಏಪ್ರಿಲ್ 25ರಂದು ಮರು ಪರೀಕ್ಷೆ ನಡೆಸುವುದಾಗಿ ಮಂಡಳಿ ಪ್ರಕಟಿಸಿತ್ತು. ಅಭ್ಯರ್ಥಿಗಳು ಈ ಹಿಂದೆ ಪರೀಕ್ಷೆ ಬರೆದ ಸ್ಥಳದಲ್ಲಿಯೇ ಮರು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಮಂಡಳಿ ತಿಳಿಸಿದೆ.
10ನೇ ತರಗತಿಯ ಗಣಿತ ಪರೀಕ್ಷೆಯ ಪ್ರಶ್ನೆಪತ್ರಿಕೆ ಕೂಡಾ ಸೋರಿಕೆಯಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಆದರೆ ಮಂಡಳಿಯು ಮರು ಪರೀಕ್ಷೆ ನಡೆಸಲು ನಿರಾಕರಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.