ನವದೆಹಲಿ (ಪಿಟಿಐ): ಡಿಎಸ್ಪಿಇ (ದೆಹಲಿ ವಿಶೇಷ ಪೊಲೀಸ್ ಕಾಯಿದೆ) ಕಾಯಿದೆಯಲ್ಲಿ ಮಾಡಲಾಗಿರುವ ತಿದ್ದುಪಡಿಯಂತೆ ಲೋಕಸಭೆಯ ಏಕೈಕ ದೊಡ್ಡ ಪಕ್ಷದ ನಾಯಕ ಸಿಬಿಐ ಮುಖ್ಯಸ್ಥರ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಅರ್ಹತೆ ಹೊಂದಿರುತ್ತಾರೆ. ಆಯ್ಕೆ ಸಮಿತಿಯಲ್ಲಿ ಸದಸ್ಯರ ಸ್ಥಾನ ಖಾಲಿ ಅಥವಾ ಅವರ ಅನುಪಸ್ಥಿತಿಯಲ್ಲಿ ನಡೆಯುವ ಆಯ್ಕೆಯು ನ್ಯಾಯಸಮ್ಮವತಲ್ಲ ಎಂದು ನಿರೂಪಿಸಲು ಆಗುವುದಿಲ್ಲ.
ಈ ಮಸೂದೆಯ ಬಗ್ಗೆ ಸೋಮವಾರ ಆರಂಭವಾದ ಸಂಸತ್ ಅಧಿವೇಶನದಲ್ಲಿ ಚರ್ಚೆ ನಡೆಯಬೇಕಿತ್ತು. ಆದರೆ, ಅಧಿವೇಶನವನ್ನು ಮುಂದೂಡಿದ್ದರಿಂದ ಚರ್ಚೆ ನಡೆಯಲಿಲ್ಲ.
ಡಿಎಸ್ಪಿಇ ಮಸೂದೆಯ ಕಲಂ 4 (ಎ)ಗೆ ಮಾಡಿರುವ ತಿದ್ದುಪಡಿಯ ಪ್ರಕಾರ, ಲೋಕಸಭೆಯಲ್ಲಿ ಅಧಿಕೃತ ವಿರೋಧ ಪಕ್ಷದ ನಾಯಕನಿಲ್ಲದಿರುವಾಗ ಏಕೈಕ ದೊಡ್ಡ ಪಕ್ಷದ ನಾಯಕನನ್ನು ಸಿಬಿಐ ನಿರ್ದೇಶಕ ಆಯ್ಕೆ ಸಮಿತಿಗೆ ಸೇರಿಸಿಕೊಳ್ಳಬಹುದಾಗಿದೆ ಎನ್ನುವ ಅಂಶ ಮಸೂದೆಯಲ್ಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.