ನವದೆಹಲಿ: ದೇಶದಾದ್ಯಂತ ತಲ್ಲಣ ಉಂಟುಮಾಡಿದ 2ಜಿ ಹಗರಣ ಕುರಿತ ತನಿಖೆ ಪ್ರಗತಿ ವರದಿಯನ್ನು ಸೀಲು ಮಾಡಿದ ಲಕೋಟೆಯಲ್ಲಿ ಕೇಂದ್ರ ಜಾಗೃತ ಆಯೋಗಕ್ಕೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸಿಬಿಐಗೆ ಗುರುವಾರ ಆದೇಶಿಸಿದೆ.
ಈ ಪ್ರಕರಣದ ತನಿಖೆ ಮೇಲ್ವಿಚಾರಣೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಬೇಕು ಎಂಬ ಬೇಡಿಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಈ ಸೂಚನೆ ನೀಡಿತು. ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ನೆರವು ನೀಡುತ್ತಿರುವ ಸಿವಿಸಿಗೆ ತನಿಖೆಯ ಪ್ರಗತಿ ವರದಿ ಸಲ್ಲಿಸಬೇಕೆಂದು ಸಿಬಿಐಗೆ ಹೇಳಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.