ADVERTISEMENT

ಸೀಮಾಂಧ್ರ ಬಂದ್‌: ಮಿಶ್ರ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2013, 19:30 IST
Last Updated 7 ಡಿಸೆಂಬರ್ 2013, 19:30 IST

ಹೈದರಾಬಾದ್‌ (ಪಿಟಿಐ): ಆಂಧ್ರ ವಿಭಜನೆ ಕುರಿತ ಕರಡು ಮಸೂ­ದೆಗೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿರುವು­ದನ್ನು ಖಂಡಿಸಿ ಅಖಂಡ ಆಂಧ್ರಪ್ರದೇಶ ಪರ ಹೋರಾಟ ನಡೆಸುತ್ತಿರುವ ಸಂಘ­ಟನೆಗಳು ನೀಡಿದ್ದ ಬಂದ್‌ ಕರೆಗೆ ಶನಿ­ವಾರ ಸೀಮಾಂಧ್ರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷಗಳು ಅಖಂಡ ಆಂಧ್ರಪ್ರದೇಶ ಪರ ಹೋರಾಟ ಮಾಡುತ್ತಿರುವ ಸಂಘಟನೆಗಳೊಂದಿಗೆ ಸೇರಿ ಸೀಮಾಂಧ್ರ ಭಾಗದಲ್ಲಿ ಪ್ರತಿಭಟನೆ­ಗಳನ್ನು ಆಯೋಜಿಸಿದ್ದವು.

ಈ ಮುನ್ನ, ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ ಮಾತ್ರ ಶುಕ್ರವಾರ ಬಂದ್‌ಗೆ ಕರೆ ನೀಡಿತ್ತು. ನಂತರ ಇದನ್ನು ಶನಿವಾರಕ್ಕೂ ವಿಸ್ತರಿಸುವಂತೆ ಆ ಪಕ್ಷ ಕರೆ ಕೊಟ್ಟಿತು.  ಆಂಧ್ರಪ್ರದೇಶ ಪತ್ರಾಂಕಿತೇತರ ಅಧಿಕಾರಿ­ಗಳ ಸಂಘ, ಟಿಡಿಪಿ ಪ್ರತ್ಯೇಕವಾಗಿ ಶನಿ­ವಾರ ಬಂದ್‌ಗೆ ಕರೆ ನೀಡಿದ್ದವು. 

ಈ ಮಧ್ಯೆ, ಆಂಧ್ರಪ್ರದೇಶ ವಿಭಜನೆ ಕುರಿತು ಪ್ರತಿ­ಕ್ರಿಯಿಸಿದ ಕೇಂದ್ರ ಜವಳಿ ಸಚಿವ ಕಾವೂರಿ ಸಾಂಬಸದಾಶಿವ ರಾವ್‌, ಈ ಕುರಿತ ಮಸೂದೆಗೆ ಸಂಸತ್ತಿನಲ್ಲಿ ಅಂಗೀಕಾರ ದೊರಕುವ ಸಾಧ್ಯತೆ ಇಲ್ಲ ಎಂದರು.

‘ಕರಡು ಮಸೂದೆಗೆ ಸಂಪುಟ ಒಪ್ಪಿಗೆ ನೀಡಿರಬಹುದು ಆದರೆ, ಈ ಮಸೂದೆ ಸಂಸತ್ತಿಗೆ ಬರುವುದೇ ಅನುಮಾನ’ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.