ಬೆಂಗಳೂರು: ಅಂತರರಾಷ್ಟ್ರೀಯ ಲೋಹ ರಫ್ತು ವಹಿವಾಟಿನಲ್ಲಿ ಕೇಂದ್ರದ ಬೊಕ್ಕಸಕ್ಕೆ ₹ 1,208 ಕೋಟಿ ವಂಚಿಸಿದ ಆರೋಪ ಎದುರಿಸುತ್ತಿರುವ ಸುಧೀರ್ ಶ್ರೀರಾಮ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸುಧೀರ್ ಅವರನ್ನು ಗುರುವಾರ ಹಾಜರುಪಡಿಸಲಾಯಿತು.
ದುಬೈನಿಂದ 23ರಂದು ಸಂಜೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಸುಧೀರ್ ಅವರನ್ನು ವಿಮಾನ ನಿಲ್ದಾಣ ಪೊಲೀಸರು ವಶಕ್ಕೆ ಪಡೆದು ನಂತರ ಸಿಬಿಐ ಪೊಲೀಸರಿಗೆ ಒಪ್ಪಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.