ಮುಜಫ್ಫರ್ನಗರ: ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿನ ಮೂವರು ವಿಚಾರಣಾಧೀನ ಕೈದಿಗಳು ಜೈಲಿನ ಆವರಣದಲ್ಲಿಯೇ ಸೆಲ್ಫಿ ಕ್ಲಿಕ್ಕಿಸಿಕೊಂಡು ಫೇಸ್ಬುಕ್ಗೆ ಹಾಕಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಛಾಯಾಚಿತ್ರ ತೆಗೆಯಲು ಬಳಸಿದ್ದ ಸ್ಮಾರ್ಟ್ಫೋನ್ ಅನ್ನು ಶನಿವಾರ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಘಟನೆಯ ಕುರಿತು ಪ್ರಕರಣ ದಾಖಲಿಸಲಾಗಿದೆ.
ಕೊಲೆ ಪ್ರಕರಣದಲ್ಲಿ ಈ ಮೂವರೂ ಜೈಲುವಾಸ ಅನುಭವಿಸುತ್ತಿದ್ದಾರೆ ಎಂದು ಜೈಲಿನ ಅಧೀಕ್ಷಕ ಹೇಳಿದ್ದಾರೆ. ಕೆಲವು ದಿನಗಳ ಹಿಂದೆ, ಜೈಲಿನಲ್ಲಿರುವ ತನ್ನ ಕಕ್ಷಿದಾರನಿಗೆ ಮೊಬೈಲ್ ಫೋನ್ ನೀಡಿದ್ದ ವಕೀಲನನ್ನು ಬಂಧಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.