ADVERTISEMENT

ಸೋನವಾನೆ ಲಂಚ ಕೇಳಿದ್ದರು

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2011, 19:30 IST
Last Updated 11 ಅಕ್ಟೋಬರ್ 2011, 19:30 IST

ಮುಂಬೈ: ಈ ವರ್ಷದ ಗಣರಾಜ್ಯೋತ್ಸವದಂದು ತೈಲ ಮಾಫಿಯಾಗೆ ಬಲಿಯಾದ ಹೆಚ್ಚುವರಿ ಜಿಲ್ಲಾಧಿಕಾರಿ ಯಶವಂತ್ ಸೋನವಾನೆ ಅವರು ದುಷ್ಕರ್ಮಿಗಳಿಂದ ಲಂಚ ಕೇಳಿದ್ದರು ಎಂದು ಸಿಬಿಐ ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ನಾಸಿಕ್‌ನ ಜುಡಿಶಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಸೋಮವಾರ ತನಿಖಾ ತಂಡ 10 ಮಂದಿಯ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದೆ.

ಮಾಲೆಗಾಂವ್ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಸೋನವಾನೆ, ಕಲಬೆರಕೆ ಇಂಧನ ವಿತರಕ ಪೊಪಟ್ ಶಿಂಧೆ ಬಳಿ ಲಂಚ ಕೇಳಿದ್ದರು ಎಂದು ತನಿಖಾಧಿಕಾರಿಗಳು ಕೋರ್ಟ್‌ಗೆ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.