ADVERTISEMENT

ಸ್ಫೋಟದಿಂದ ಬಿಜೆಪಿಗೆ ಲಾಭ - ಕಾಂಗ್ರೆಸ್‌

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2013, 13:18 IST
Last Updated 17 ಏಪ್ರಿಲ್ 2013, 13:18 IST

ನವದೆಹಲಿ (ಐಎಎನ್‌ಎಸ್): ಬೆಂಗಳೂರಿನಲ್ಲಿ ಬಿಜೆಪಿ ಕಚೇರಿ ಬಳಿ ಬುಧವಾರ ಸಂಭವಿಸಿರುವ ಸ್ಫೋಟವು ಮುಂದಿನ ತಿಂಗಳು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲವಾಗಲಿದೆ ಎಂದು ಕಾಂಗ್ರೆಸ್ ಮುಖಂಡ ಶಕೀಲ್ ಅಹಮದ್ ಅವರು ಹೇಳಿದ್ದಾರೆ.

ಶಕೀಲ್ ಅವರು ತಮ್ಮ ಟ್ವಿಟರ್ ಪುಟದಲ್ಲಿ `ಬಿಜೆಪಿ ಕಚೇರಿ ಬಳಿ ಸ್ಫೋಟ ಸಂಭವಿಸಿರುವುದರಿಂದ ಇದೊಂದು ಉಗ್ರರ ಕೃತ್ಯ ಎನ್ನಲಾಗುತ್ತದೆ. ಇದರಿಂದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಲಾಭವಾಗುವುದರಲ್ಲಿ ಸಂದೇಹವಿಲ್ಲ' ಎಂದು ಬರೆದಿದ್ದಾರೆ.

ಶಕೀಲ್ ಹೇಳಿಕೆಯನ್ನು ಬಿಜೆಪಿ ಖಂಡಿಸಿದ್ದು, ಬಿಜೆಪಿ ವಕ್ತಾರೆ ಮೀನಾಕ್ಷಿ ಲೆಖಿ ಅವರು `ಕಾಂಗ್ರೆಸ್‌ನ ಹಿರಿಯ ಮುಖಂಡರಿಂದ ಬರದಂತಹ ಇಂತಹ ಹೇಳಿಕೆ ಅಂಧಿಕಪ್ರಸಂಗಿತನದಿಂದ ಕೂಡಿದ್ದು, ಕರ್ನಾಟಕದಲ್ಲಿ ಈಗಾಗಲೇ ಪಕ್ಷ (ಕಾಂಗ್ರೆಸ್) ಸೊಲೊಪ್ಪಿಕೊಂಡಿರುವುದನ್ನು ಒಪ್ಪಿಕೊಂಡಿದ್ದೆ' ಎಂದು ಹೇಳಿದರು.

ಬೆಂಗಳೂರಿನ ಮಲ್ಲೇಶರಂನಲ್ಲಿರುವ ಬಿಜೆಪಿ ಕಚೇರಿ ಬಳಿ ಬುಧವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಎಂಟು ಮಂದಿ ಪೊಲೀಸರು ಸೇರಿದಂತೆ ಒಟ್ಟು ಹದಿನಾರು ಜನರು ಗಾಯಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.