ADVERTISEMENT

ಹಜಾರೆ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವೆ: ಸಂತೋಷ್‌ ಹೆಗ್ಡೆ

ಪಿಟಿಐ
Published 14 ಮಾರ್ಚ್ 2018, 19:30 IST
Last Updated 14 ಮಾರ್ಚ್ 2018, 19:30 IST

ಹೈದರಾಬಾದ್‌ : ‘ಲೋಕಪಾಲ ಮಸೂದೆ ಜಾರಿಗೆ ತರಬೇಕೆಂದು ಒತ್ತಾಯಿಸಿ ಸಾಮಾಜಿಕ ಹೊರಾಟಗಾರ ಅಣ್ಣಾ ಹಜಾರೆ ಅವರು ದೆಹಲಿಯಲ್ಲಿ ಈ ತಿಂಗಳ 23ರಂದು
ನಡೆಸಲಿರುವ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುತ್ತೇನೆ’ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಬುಧವಾರ ಹೇಳಿದ್ದಾರೆ.

2011ರಲ್ಲಿ ಹಜಾರೆ ಅವರು ನಡೆಸಿದ್ದ ಭ್ರಷ್ಟಾಚಾರ ವಿರೋಧಿ ಹೋರಾಟದಲ್ಲೂ ಹೆಗ್ಡೆ ಪಾಲ್ಗೊಂಡಿದ್ದರು.

‘ಈಚೆಗೆ ಬೆಂಗಳೂರಿಗೆ ಬಂದಿದ್ದ ಹಜಾರೆ ಅವರು, ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವಂತೆ ನನಗೆ ಆಹ್ವಾನ ನೀಡಿದ್ದರು. ನಾನು ಅದಕ್ಕೆ ಒಪ್ಪಿಗೆ ಸೂಚಿಸಿದ್ದೇನೆ.
ಈ ಹೋರಾಟ ರಾಜಕೀಯ ತರವಾದದ್ದು’ ಎಂದು ಹೇಳಿದ್ದಾರೆ.

ADVERTISEMENT

‘ಲೋಕಪಾಲ ನೇಮಕ ವಿಚಾರದಲ್ಲಿ ಎನ್‌ಡಿಎ ಸರ್ಕಾರವು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ಇಲ್ಲ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.