ADVERTISEMENT

ಹಲ್ಲೆ; ಪೊಲೀಸ್ ಹೆಡ್‌ ಕಾನ್‌ಸ್ಟೆಬಲ್‌ ಸಾವು

​ಪ್ರಜಾವಾಣಿ ವಾರ್ತೆ
Published 13 ಜುಲೈ 2019, 19:28 IST
Last Updated 13 ಜುಲೈ 2019, 19:28 IST

ಜೈಪುರ: ಭೂ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದ ಪೊಲೀಸ್‌ ಹೆಡ್‌ ಕಾನ್‌ಸ್ಟೆಬಲ್‌ ಒಬ್ಬರನ್ನು ಜನರು ಹೊಡೆದು ಸಾಯಿಸಿದ ಘಟನೆ ರಾಜಸ್ಥಾನದ ರಾಜಸಮಂದ ಜಿಲ್ಲೆಯಲ್ಲಿ ನಡೆದಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಭೂವಿವಾದದ ವಿಚಾರಣೆಗಾಗಿ ಸ್ಥಳಕ್ಕೆ ಹೋಗಿದ್ದ ಹೆಡ್‌ ಕಾನ್‌ಸ್ಟೆಬಲ್‌ ಅಬ್ದುಲ್‌ ಗನಿ ಹಾಗೂ ಸ್ಥಳೀಯರ ನಡುವೆ ಶನಿವಾರ ಮಾತಿನ ಚಕಮಕಿ ನಡೆದಿತ್ತು. ಅದು ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿ, ಕೊನೆಗೆ ಸೇರಿದ್ದ ಜನರೆಲ್ಲರೂ ಗನಿ ಅವರನ್ನು ಥಳಿಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ನಂತರ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದರು.

ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು ಆರೋಪಿಗಳನ್ನು ಗುರುತಿಸಿ ಬಂಧಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ ಎಂದು ವರದಿಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.