ನವದೆಹಲಿ(ಪಿಟಿಐ): ಮೋದಿ ಅಲೆಯ ಭಯದಲ್ಲಿರುವ ಕಾಂಗ್ರೆಸ್ ಬರುವ ಲೋಕಸಭಾ ಚುನಾವಣೆಯಲ್ಲಿ ಹಾಲಿ 50 ಸಂಸದರಿಗೆ ಟಿಕೇಟ್ ನೀಡದಿರಲು ನಿರ್ಧರಿಸಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಉತ್ತಮವಾಗಿ ಕೆಲಸ ಮಾಡದ ಸಂಸದರಿಗೆ ಟಿಕೇಟ್ನೀಡದಿರಲು ಪಕ್ಷದ ವರಿಷ್ಠೆ ಸೋನಿಯಾಗಾಂಧಿ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸುಮಾರು 350 ಕ್ಷೇತ್ರಗಳಲ್ಲಿ ಯುವಕರು ಮತ್ತು ಮಹಿಳೆಯರಿಗೆ ಟಕೇಟ್ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಬಹುತೇಕ ಹೊಸ ಮುಖಗಳಿಗೆ ಮಣೆ ಹಾಕಿ ಎನ್ಡಿಎಗೆ ಪ್ರಬಲ ಪೈಪೋಟಿ ನೀಡುವ ರಣತಂತ್ರವನ್ನು ರೂಪಿಸಲಾಗಿದೆ ಎಂದು ಕಾಂಗ್ರೆಸ್ಮೂಲಗಳು ತಿಳಿಸಿವೆ.
ಸದನದಲ್ಲಿ ಕಡಿಮೆ ಹಾಜರಾತಿ ಇರುವ ಸಂಸದರಿಗೂ ಟಿಕೇಟ್ ಕೈತಪ್ಪುವ ಸಾಧ್ಯತೆಗಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.