ADVERTISEMENT

ಹಿಂದೂ ದೇವರ ಅವಹೇಳನ: ನಾಲ್ವರ ವಿರುದ್ಧ ಎಫ್‌ಐಆರ್‌

ಪಿಟಿಐ
Published 24 ಫೆಬ್ರುವರಿ 2018, 19:30 IST
Last Updated 24 ಫೆಬ್ರುವರಿ 2018, 19:30 IST

ಬಲ್ಲಿಯಾ : ‘ಪ್ರಧಾನಿ ನರೇಂದ್ರಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹಾಗೂ ಹಿಂದೂದೇವರ ವಿರುದ್ಧ ಸಾಮಾಜಿಕ ಜಾಲತಾಣ
ಗಳಲ್ಲಿ ಅವಹೇಳನಕಾರಿ ಬರಹ ಬರೆದ ನಾಲ್ಕು ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ನಾಲ್ವರು ಆರೋಪಿಗಳು ಹಿಂದೂದೇವರು, ಪ್ರಧಾನಿ ಹಾಗೂ ಮುಖ್ಯಮಂತ್ರಿ ವಿರುದ್ಧ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌ನಲ್ಲಿ ಅವಹೇಳನಕಾರಿ ಬರಹ ಬರೆದಿದ್ದರು. ಈ ಬಗ್ಗೆ ಬಿಜೆಪಿ ನಾಯಕ ಧರಮ್‌ ದೇವ್‌ ಸಿಂಗ್‌ ದೂರು ನೀಡಿದ್ದರು’ ಸ್ಥಳೀಯ ಠಾಣಾಧಿಕಾರಿ ಜಗದೀಶ್‌ ಪ್ರಸಾದ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT