ADVERTISEMENT

ಹಿಂಸೆಯಿಂದ ಪರಿಹಾರ ಸಾಧ್ಯವಿಲ್ಲ; ಶಾಂತಿ ಕಾಪಾಡಿ: ವೆಂಕಯ್ಯ ನಾಯ್ಡು

ಏಜೆನ್ಸೀಸ್
Published 13 ಸೆಪ್ಟೆಂಬರ್ 2016, 5:32 IST
Last Updated 13 ಸೆಪ್ಟೆಂಬರ್ 2016, 5:32 IST
ಹಿಂಸೆಯಿಂದ ಪರಿಹಾರ ಸಾಧ್ಯವಿಲ್ಲ; ಶಾಂತಿ ಕಾಪಾಡಿ: ವೆಂಕಯ್ಯ ನಾಯ್ಡು
ಹಿಂಸೆಯಿಂದ ಪರಿಹಾರ ಸಾಧ್ಯವಿಲ್ಲ; ಶಾಂತಿ ಕಾಪಾಡಿ: ವೆಂಕಯ್ಯ ನಾಯ್ಡು   

ನವದೆಹಲಿ: ಹಿಂಸಾಚಾರದಿಂದ ಪರಿಹಾರ ಸಿಗುವುದಿಲ್ಲ. ಶಾಂತಿ ಕಾಪಾಡಿ. ಪ್ರತಿಭಟನೆ ಹೆಸರಲ್ಲಿ ಹಿಂಸಾಚಾರ ಸಹಿಸಲಾಗುವುದಿಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಕರ್ನಾಟಕ ಹಾಗೂ ತಮಿಳು ನಾಡು ಜನರಿಗೆ ಮನವಿ ಮಾಡಿದರು.

ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಕಾವೇರಿ ವಿಚಾರವಾಗಿ ನಡೆದಿರುವ ಹಿಂಸಾಚಾರ ಕುರಿತು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ವಿವಾದವನ್ನು ರಸ್ತೆಯಲ್ಲಿ ಬಗೆಹರಿಸಲು ಸಾಧ್ಯವಿಲ್ಲ. ಯಾರೂ ಜನರನ್ನು ಪ್ರಚೋದಿಸುವ ಕೆಲಸ ಮಾಡಬಾರದು ಎಂದು ಎಚ್ಚರಿಸಿದರು.

ಕರ್ನಾಟಕ ಹಾಗೂ ತಮಿಳುನಾಡು ಜನರು ಶಾಂತಿ ಕಾಪಾಡುವಂತೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಮನವೊಲಿಸಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.