ಕಾಂಗ್ರಾ: ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ನೂರ್ಪುರದಲ್ಲಿ ಸೋಮವಾರ ಶಾಲಾ ಬಸ್ ಆಳವಾದ ಕಮರಿಗೆ ಬಿದ್ದು, 26 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ಬಂದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಶಾಲಾ ಬಸ್ ದುರಂತದಲ್ಲಿ ಮೃತರ ಸಂಖ್ಯೆ 20ಕ್ಕೆ ಏರಿದೆ ಎಂದು ಹಿಮಾಚಲ ಪ್ರದೇಶ ಶಿಕ್ಷಣ ಸಚಿವ ಸುರೇಶ್ ಭರದ್ವಾಜ್ ಖಚಿತಪಡಿಸಿದ್ದರು. ನಂತರ ಲಭ್ಯವಾದ ಮಾಹಿತಿ ಪ್ರಕಾರ 26 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.