ADVERTISEMENT

ಹೈದರಾಬಾದ್‌ ಸ್ಫೋಟ: ಆರೋಪಪಟ್ಟಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2014, 19:30 IST
Last Updated 14 ಮಾರ್ಚ್ 2014, 19:30 IST

ಹೈದರಾಬಾದ್‌ (ಪಿಟಿಐ): ಕಳೆದ ಫೆಬ್ರುವರಿಯಲ್ಲಿ ಸಂಭವಿಸಿದ  ಅವಳಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿಂತೆ ಇಂಡಿಯನ್‌ ಮುಜಾಹಿದೀನ್‌ ಸಂಘಟನೆಯ ಯಾಸೀನ್ ಭಟ್ಕಳ ಮತ್ತು ಅಸಾದುಲ್ಲಾ ಅಖ್ತರ್ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ.

ಹೈದರಾಬಾದ್‌ನ ದಿಲ್‌ಸುಖ್‌ನಗರದಲ್ಲಿ ಸಂಭವಿ­ಸಿದ ಅವಳಿ  ಸ್ಫೋಟದಲ್ಲಿ 18 ಅಮಾಯಕರು ಮೃತಪಟ್ಟು, 131 ಜನರು   ಗಾಯಗೊಂಡಿದ್ದರು.

‘ಈ ವಿಧ್ವಂಸಕ ಕೃತ್ಯಗಳಿಗೆ ನೆರೆ ರಾಷ್ಟ್ರಗಳಿಂದ ಆರ್ಥಿಕ ನೆರವು ಹರಿದು ಬಂದಿರುವುದು ದೃಢಪಟ್ಟಿದೆ. ಬಾಂಬ್‌ ಸ್ಫೋಟದಂತಹ ವಿಧ್ವಂಸಕ ಕೃತ್ಯಗ­ಳಿಂದ ಇಂಡಿಯನ್‌ ಮುಜಾಹಿದೀನ್, ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ. ಜನರಲ್ಲಿ ಭಯವನ್ನು ಹುಟ್ಟಿಸುವ ಪ್ರಯತ್ನದ ಭಾಗವಾಗಿ ಹೈದರಾಬಾದ್‌ನಲ್ಲಿ ಅವಳಿ ಸ್ಫೋಟದ ಸಂಚು ರೂಪಿಸಿತ್ತು’ ಎಂದು ಎನ್‌ಐಎ ಆರೋಪಪಟ್ಟಿಯಲ್ಲಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.