ADVERTISEMENT

‘ಕಾಶ್ಮೀರಿಗಳ ಹೃದಯ ಗೆಲ್ಲಿ’

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2016, 19:35 IST
Last Updated 8 ಆಗಸ್ಟ್ 2016, 19:35 IST
ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಭೇಟಿಯಾಗಿ ಜಮ್ಮುಕಾಶ್ಮೀರದ ಪ್ರಸ್ತುತ ಸ್ಥಿತಿಗತಿ ಬಗ್ಗೆ ಮುಖ್ಯಮಂತ್ರಿ ಮೆಹಬೂಬ ಮುಫ್ತಿ  ಸೋಮವಾರ ಚರ್ಚಿಸಿದರು –ಪಿಟಿಐ ಚಿತ್ರ
ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಭೇಟಿಯಾಗಿ ಜಮ್ಮುಕಾಶ್ಮೀರದ ಪ್ರಸ್ತುತ ಸ್ಥಿತಿಗತಿ ಬಗ್ಗೆ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಸೋಮವಾರ ಚರ್ಚಿಸಿದರು –ಪಿಟಿಐ ಚಿತ್ರ   

ನವದೆಹಲಿ: ‘ಕಾಶ್ಮೀರದ ಜನರ ಹೃದಯ ಗೆಲ್ಲಲು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಆರಂಭಿಸಿದ್ದ ಮಾತುಕತೆ ಪ್ರಕ್ರಿಯೆಯನ್ನು ಮುಂದುವರಿಸಬೇಕು’ ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೋರಿದ್ದಾರೆ.

ಗೃಹ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೊಭಾಲ್ ಜತೆ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಸ್ಥಿತಿಯ ಪರಾಮರ್ಶೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಪ್ರಧಾನಿ ಜನರ ಜತೆ ಮಾತನಾಡಿ ಅವರ ಸಮಸ್ಯೆ ಆಲಿಸಬೇಕು ಮತ್ತು ಜನರ ಹೃದಯ ಗೆಲ್ಲಲು ಕೆಲವು ತುರ್ತು ಕ್ರಮ ತೆಗೆದುಕೊಳ್ಳಬೇಕು’ ಎಂದು ಹೇಳಿದರು.

‘ಕಾಶ್ಮೀರದಲ್ಲಿರುವವರು ನಮ್ಮ ಜನರು, ಮಾತುಕತೆ ನಡೆಸಿದರೆ ಅಲ್ಲಿನ ಪರಿಸ್ಥಿತಿ ಸುಧಾರಿಸುತ್ತದೆ’ ಎಂದು ಅವರು ಹೇಳಿದರು.

ಗಲಭೆಯಲ್ಲಿ ಅನೇಕ ಜನರು ಗಾಯಗೊಂಡಿದ್ದಾರೆ, ಭದ್ರತಾ ಸಿಬ್ಬಂದಿ ಸಹ ಪ್ರಾಣ ಕಳೆದುಕೊಂಡಿದ್ದಾರೆ. ಪರಿಸ್ಥಿತಿ ತಿಳಿಗೊಳಿಸಲು ನಾವು ಕ್ರಮ ತೆಗೆದುಕೊಳ್ಳದಿದ್ದರೆ ಸಾವು–ನೋವುಗಳು ಇನ್ನಷ್ಟು ಹೆಚ್ಚುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.