ಮುಜಪ್ಫರ್ನಗರ, ಉತ್ತರಪ್ರದೇಶ: ’ಕಳೆದು ಎರಡು ದಿನಗಳಲ್ಲಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ನೂರಕ್ಕೂ ಅಧಿಕ ಹಸುಗಳು ಸಾವನ್ನಪ್ಪಿದ್ದು, ಈ ಕುರಿತಂತೆ ತನಿಖೆಗೆ ಆದೇಶಿಸಲಾಗಿದೆ‘ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
’ವಿಷಪೂರಿತ ಮೇವು ಹಾಗೂ ಮಾಲಿನ್ಯಗೊಂಡ ನೀರು ಸೇವಿಸಿ ಈ ಹಸುಗಳು ಸಾವನ್ನಪ್ಪಿವೆ‘ ಎಂದು ಉಪವಿಭಾಗಾಧಿಕಾರಿ ವಿಜಯ್ಕುಮಾರ್ ತಿಳಿಸಿದ್ದಾರೆ.
ಘಟನೆ ಕುರಿತಂತೆ ಈಗಾಗಲೇ ತನಿಖೆಗೆ ಆರಂಭಗೊಂಡಿದ್ದು, ಕಂದಾಯ ಇಲಾಖೆ, ಪಶುವೈದ್ಯರು ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.