ADVERTISEMENT

ಉತ್ತರ ಪ್ರದೇಶ: ಕಳ್ಳಬಟ್ಟಿ ಸೇವಿಸಿ 10 ಮಂದಿ ಸಾವು, ಹಲವರು ಅಸ್ವಸ್ಥ

ಬಾರಾಬಂಕಿ ಜಿಲ್ಲೆಯ ರಾಮ್‌ನಗರದಲ್ಲಿ ಘಟನೆ

ಪಿಟಿಐ
Published 28 ಮೇ 2019, 16:38 IST
Last Updated 28 ಮೇ 2019, 16:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬಾರಾಬಂಕಿ:ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ರಾಮ್‌ನಗರದಲ್ಲಿಕಳ್ಳಬಟ್ಟಿ ಸೇವಿಸಿ 10 ಮಂದಿ ಮೃತಪಟ್ಟು, ಹಲವರು ಅಸ್ವಸ್ಥರಾಗಿದ್ದಾರೆ.

ರಾಮ್‌ನಗರದ ರಾಣಿಗಂಜ್ ಮತ್ತು ಸಮೀಪದ ಗ್ರಾಮಗಳ ಜನ ಸೋಮವಾರ ರಾತ್ರಿ ಕಳ್ಳಬಟ್ಟಿ ಸೇವಿಸಿದ್ದು, ಅಸ್ವಸ್ಥರಾಗಿದ್ದಾರೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ 10 ಮಂದಿ ಮೃತಪಟ್ಟಿದ್ದಾರೆಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗಂಭೀರವಾಗಿ ಪರಿಗಣಿಸಿದ್ದು, ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ADVERTISEMENT

ಘಟನೆ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಮತ್ತು ಅಬಕಾರಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.