ADVERTISEMENT

ಮಹಾರಾಷ್ಟ್ರದಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತದಲ್ಲಿ 11 ಮಂದಿ ದುರ್ಮರಣ

​ಪ್ರಜಾವಾಣಿ ವಾರ್ತೆ
Published 19 ಜನವರಿ 2023, 10:58 IST
Last Updated 19 ಜನವರಿ 2023, 10:58 IST
ಅಪಘಾತದಲ್ಲಿ ವ್ಯಾನ್‌ವೊಂದು ಸಂಪೂರ್ಣ ಜಖಂಗೊಂಡಿರುವುದು.
ಅಪಘಾತದಲ್ಲಿ ವ್ಯಾನ್‌ವೊಂದು ಸಂಪೂರ್ಣ ಜಖಂಗೊಂಡಿರುವುದು.    

ಮುಂಬೈ: ಮಹಾರಾಷ್ಟ್ರದ ಮುಂಬೈ– ಗೋವಾ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ 11 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ರಾಯಗಡ ಜಿಲ್ಲೆಯ ರೆಪೋಲಿ ಹಾಗೂ ಸಿಂಧುದುರ್ಗ ಜಿಲ್ಲೆಯ ಕಣಕವಲಿಯಲ್ಲಿ ಅಪಘಾತಗಳು ಸಂಭವಿಸಿವೆ.

ರಾಯಗಡದಲ್ಲಿ ನಡೆದ ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಒಂಬತ್ತು ಮಂದಿ ಮೃತಪಟ್ಟಿದ್ದು, 4 ವರ್ಷದ ಬಾಲಕನೊಬ್ಬ ಬದುಕುಳಿದಿದ್ದಾನೆ.

ADVERTISEMENT

ಮುಂಬೈನಿಂದ ಗೋವಾಗೆ ತೆರಳುತ್ತಿದ್ದ ಬಸ್‌ವೊಂದು ಸಿಂಧುದುರ್ಗದ ಗಡ್ ನದಿಯ ಸೇತುವೆ ಬಳಿ ಉರುಳಿಬಿದ್ದು ಇಬ್ಬರು ಪ್ರಯಾಣಿಕರು ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 23 ಮಂದಿ ಗಾಯಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.