ನವದೆಹಲಿ:ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಸೇರಿದಂತೆ ಮೇಘಾಲಯದ ಹದಿನೆಂಟು ಕಾಂಗ್ರೆಸ್ ಶಾಸಕರ ಪೈಕಿ ಹನ್ನೆರಡು ಮಂದಿ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ (ಟಿಎಂಸಿ) ಬುಧವಾರ ಸೇರ್ಪಡೆಗೊಂಡಿದ್ದಾರೆ.
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಂಗ್ಮಾ ಅವರು ಕಾಂಗ್ರೆಸ್ನ ಹಿರಿಯ ಮುಖಂಡರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.
ಹೊಸ ಶಾಸಕರ ಸೇರ್ಪಡೆಯಿಂದಾಗಿ ತೃಣಮೂಲ ಕಾಂಗ್ರೆಸ್ ರಾಜ್ಯದಲ್ಲಿ ಪ್ರಮುಖ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ ಎಂದು ಟಿಎಂಸಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.