ADVERTISEMENT

ಟ್ರ್ಯಾಕ್ಟರ್ ಅವಘಡ: ಗಂಗಾಸ್ನಾನಕ್ಕೆ ತೆರಳುತ್ತಿದ್ದ 15 ಜನ ಕೊಳಕ್ಕೆ ಬಿದ್ದು ಸಾವು

ಪಿಟಿಐ
Published 24 ಫೆಬ್ರುವರಿ 2024, 7:58 IST
Last Updated 24 ಫೆಬ್ರುವರಿ 2024, 7:58 IST
<div class="paragraphs"><p>ಅವಘಡದ ದೃಶ್ಯ</p></div>

ಅವಘಡದ ದೃಶ್ಯ

   

– ಪಿಟಿಐ ಚಿತ್ರ

ಲಖನೌ: ಉತ್ತರ ಪ್ರದೇಶದ ಕಾಸ್‌ಗಂಜಗಗ ಜಿಲ್ಲೆಯಲ್ಲಿ ಶುಕ್ರವಾರ ಟ್ರ್ಯಾಕ್ಟರ್ ಟ್ರಾಲಿಯೊಂದು ಕೊಳಕ್ಕೆ ಉರುಳಿ, 7 ಮಕ್ಕಳು ಸೇರಿ 15 ಮಂದಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಜಿಲ್ಲೆಯ ಪಟಿಯಾಲಿಯಲ್ಲಿರುವ ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡಲು ತೆರಳುತ್ತಿದ್ದ ವೇಳೆ, ಪಟಿಯಾಲಿ–ಧರಿಯಾಗಂಜ್ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಗಾಯಗೊಂಡಿರುವ ಸುಮಾರು 20 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.