ಗುವಾಹಟಿ: ಅಸ್ಸಾಂನ ಗೋಲಘಾಟ್ ಜಿಲ್ಲೆಯಲ್ಲಿ ಕಳ್ಳಬಟ್ಟಿ ಸಾರಾಯಿ ಕುಡಿದು 15 ಕಾರ್ಮಿಕರು ಮೃತಪಟ್ಟಿದ್ದು, 30 ಮಂದಿ ಅಸ್ವಸ್ಥರಾಗಿದ್ದಾರೆ.
ಮೃತರು ಸಾಲ್ಮೀರಾ ಟೀ ಎಸ್ಟೇಟ್ನ ಕಾರ್ಮಿಕರು. ಮೃತರ ಸಂಖ್ಯೆ ಹೆಚ್ಚಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಮಿಥೈಲ್ ಅಂಶವುಳ್ಳ ಸಾರಾಯಿ ಸೇವಿಸಿದ್ದರು. ಮರಣೋತ್ತರ ಪರೀಕ್ಷೆ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ’ ಎಂದು ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.