ಉತ್ತರಕಾಶಿ (ಉತ್ತರಾಖಂಡ): ಯಮುನೋತ್ರಿಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಭಾನುವಾರ ಸಂಜೆ ಇಲ್ಲಿಗೆ ಸಮೀಪದ ದಮ್ಟಾ ಎಂಬಲ್ಲಿ ಉರುಳಿಬಿದ್ದಿದ್ದು, ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ.
‘ಬಸ್ನಲ್ಲಿ 30 ಜನರು ಪ್ರಯಾಣಿಸುತ್ತಿದ್ದರು. ಘಟನಾ ಸ್ಥಳಕ್ಕೆ ಉತ್ತರಕಾಶಿ ಜಿಲ್ಲಾಧಿಕಾರಿ ಅಭಿಷೇಕ್ ರುಹೇಲಾ ಸೇರಿದಂತೆ ಹಿರಿಯ ಅಧಿಕಾರಿಗಳು ದೌಡಾಯಿಸಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.