ADVERTISEMENT

ಗುವಾಹಟಿ: ಸಿಡಿಲಿಗೆ 18 ಆನೆ ಸಾವು

ಪಿಟಿಐ
Published 13 ಮೇ 2021, 19:55 IST
Last Updated 13 ಮೇ 2021, 19:55 IST

ಗುವಾಹಟಿ: ಅಸ್ಸಾಂನ ನಾಗಾನ್ ಜಿಲ್ಲೆಯ ಅರಣ್ಯದಲ್ಲಿ ಸಿಡಿಲು ಬಡಿದು ಹದಿನೆಂಟು ಆನೆಗಳು ಮೃತಪಟ್ಟಿವೆ ಎಂದು ಅರಣ್ಯ ಇಲಾಖೆ ಅಧಿಕಾರಿ ಗುರುವಾರ ತಿಳಿಸಿದ್ದಾರೆ.

‘ಕಥಿಯಾಟೋಲಿ ವಲಯದಲ್ಲಿ ಈ ಘಟನೆ ನಡೆದಿದ್ದು, ಸಿಡಿಲು ಬಡಿದು ಆನೆಗಳು ಮೃತಪಟ್ಟಿವೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆದರೆ, ಮರಣೋತ್ತರ ಪರೀಕ್ಷೆಯ ನಂತರವೇ ನಿಖರವಾದ ಕಾರಣ ತಿಳಿಯಲಿದೆ’ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಅಮಿತ್ ಸಹಾಯ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT