ADVERTISEMENT

ಟಾಟಾ ಸ್ಟೀಲ್ ಕಾರ್ಖಾನೆಯಲ್ಲಿ ಆವಿ ಸೋರಿಕೆ; 19 ಮಂದಿಗೆ ಸುಟ್ಟ ಗಾಯ

ಪಿಟಿಐ
Published 13 ಜೂನ್ 2023, 14:17 IST
Last Updated 13 ಜೂನ್ 2023, 14:17 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಭುವನೇಶ್ವರ: ಒಡಿಶಾದ ಮೇರಮುಂಡಲಿ ಉಕ್ಕು ಕಾರ್ಖಾನೆಯಲ್ಲಿ ಆವಿ ಸೋರಿಕೆಯಾಗಿ 19 ಮಂದಿಗೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಗಾಯಾಳುಗಳನ್ನು ತಕ್ಷಣವೇ ಕಟಕ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಕಾರ್ಖಾನೆಯಲ್ಲಿ ಊದುಕುಲುಮೆ ಪರಿಶೀಲಿಸುತ್ತಿದ್ದ ಕಾರ್ಮಿಕರು ಹಾಗೂ ಎಂಜಿನಿಯರ್‌ಗಳು ಗಾಯಗೊಂಡಿದ್ದಾರೆ ಎಂದು ಢೆಂಕನಾಲ್ ಎಸ್‌ಪಿ ಜ್ಞಾನರಂಜನ್ ಮೋಹಪಾತ್ರ ತಿಳಿಸಿದ್ದಾರೆ.

ADVERTISEMENT

ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ ಎಂದು ಟಾಟಾ ಸ್ಟೀಲ್, ಪ್ರಕಟಣೆ ತಿಳಿಸಿದೆ.

ಅವಘಡದ ಹಿಂದಿನ ಕಾರಣ ತಿಳಿಯಲು ಆಂತರಿಕ ತನಿಖೆಗೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.