ಡೆಹ್ರಾಡೂನ್(ಪಿಟಿಐ): ಪ್ರಸಿದ್ಧ ಪುಣ್ಯಕ್ಷೇತ್ರ ಕೇದಾರನಾಥದಲ್ಲಿ ಅಧಿಕ ಹಿಮಪಾತ ಹಾಗೂ ಕೇದಾರ ಕಣಿವೆಯ ಕೆಳಭಾಗದಲ್ಲಿ ಮಳೆ ಕಾಣಿಸಿಕೊಂಡ ಕಾರಣ ಎರಡನೇ ದಿನ ಸೋಮವಾರವೂ ಕೇದಾರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.
‘ಯಾತ್ರಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ತಾತ್ಕಾಲಿಕವಾಗಿ ಯಾತ್ರೆಯನ್ನು ಸ್ಥಗಿತ ಮಾಡಲಾಗಿದೆ. ಹವಾಮಾನ ಸುಧಾರಿಸಿದ ಬಳಿಕ ಸೋನ್ಪ್ರಯಾಗದಲ್ಲಿ ಉಳಿದುಕೊಂಡ ಯಾತ್ರಾರ್ಥಿಗಳಿಗೆ ಕೇದಾರನಾಥಕ್ಕೆ ತೆರಳಲು ಅವಕಾಶ ನೀಡಲಾಗುವುದು’ ಎಂದು ಉತ್ತರಾಖಂಡ ಮುಖ್ಯಮಂತ್ರಿ ಹರೀಶ್ ರಾವತ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.