ADVERTISEMENT

ಮಹಾರಾಷ್ಟ್ರ ಕಟ್ಟಡ ಕುಸಿತ ಪ್ರಕರಣ: ಇಬ್ಬರು ಸಾವು, ಹಲವು ಮಂದಿ ಸಿಲುಕಿರುವ ಶಂಕೆ

ಏಜೆನ್ಸೀಸ್
Published 25 ಆಗಸ್ಟ್ 2020, 3:41 IST
Last Updated 25 ಆಗಸ್ಟ್ 2020, 3:41 IST
ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಎನ್‌ಡಿಆರ್‌ಎಫ್‌ ಸಿಬ್ಬಂದಿ (ಎಎನ್‌ಐ ಚಿತ್ರ)
ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಎನ್‌ಡಿಆರ್‌ಎಫ್‌ ಸಿಬ್ಬಂದಿ (ಎಎನ್‌ಐ ಚಿತ್ರ)   

ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮಹಾದ್ ನಗರದಲ್ಲಿ ಸಂಭವಿಸಿರುವ ಕಟ್ಟಡ ಕುಸಿತ ದುರಂತದಲ್ಲಿಇಬ್ಬರು ಮೃತಪಟ್ಟಿದ್ದಾರೆ. ಅವಶೇಷಗಳಡಿ ಸಿಲುಕಿರುವವರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರಿಸಲಾಗಿದೆ.

ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ಶೋಧ ಕಾರ್ಯಾಚರಣೆ ನಡೆಸುತ್ತಿದೆ.

‘ಘಟನಾ ಸ್ಥಳದಲ್ಲಿ ಮೂರು ಎನ್‌ಡಿಆರ್‌ಎಫ್‌ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಮುಂಬೈಗೆ ರವಾನಿಸಲಾಗಿದೆ. ವಿಶೇಷ ತಂಡ ತನಿಖೆ ಆರಂಭಿಸಿದೆ’ ಎಂದು ಸಚಿವೆ ಅದಿತಿ ತತ್ಕರೆ ತಿಳಿಸಿದ್ದಾರೆ.

ADVERTISEMENT

**

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.