ADVERTISEMENT

ಕಾಶ್ಮೀರ: ಇಬ್ಬರು ಹಿಜ್ಬುಲ್‌ ಉಗ್ರರ ಹತ್ಯೆ

ಏಜೆನ್ಸೀಸ್
Published 11 ಅಕ್ಟೋಬರ್ 2018, 11:10 IST
Last Updated 11 ಅಕ್ಟೋಬರ್ 2018, 11:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಸಾತ್‌ಗುಂಡ್‌ನಲ್ಲಿ ಭದ್ರತಾಪಡೆಗಳು ಗುರುವಾರ ನಡೆಸಿದ ಎನ್‌ಕೌಂಟರ್‌ಗೆ ಕಮಾಂಡರ್‌ ಮನನ್‌ ಬಷೀರ್‌ ವಾನಿ ಸೇರಿ ಇಬ್ಬರು ಹಿಜ್ಬುಲ್‌ ಮುಜಾಹಿದೀನ್‌ ಉಗ್ರರು ಬಲಿಯಾಗಿದ್ದಾರೆ.

ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (ಎಎಮ್‌ಯು) ಪಿಎಚ್‌.ಡಿ ಸಂಶೋಧನಾ ವಿದ್ಯಾರ್ಥಿಯಾಗಿದ್ದ 27 ವರ್ಷದ ಮನನ್‌ ಈಚೆಗೆ ಉಗ್ರ ಸಂಘಟನೆಗೆ ಸೇರ್ಪಡೆಗೊಂಡಿದ್ದ.

‘ಭದ್ರತಾ ಪಡೆಗಳು ಉಗ್ರರನ್ನು ಸುತ್ತುವರಿದಾಗ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಉಗ್ರರು ಹತರಾಗಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

‘ಉಗ್ರರು ಅವಿತಿದ್ದ ಪ್ರದೇಶವನ್ನು ಭದ್ರತಾ ಪಡೆ ಯೋಧರು ಸುತ್ತುವರಿದು, ಶರಣಾಗಲು ಸೂಚಿಸಿದ್ದಾರೆ. ಈ ವೇಳೆ ಉಗ್ರರು ಗುಂಡಿನ ದಾಳಿ ಆರಂಭಿಸಿದ್ದಾರೆ. ಪ್ರತಿದಾಳಿ ನಡೆಸಿದಾಗ ಹತರಾಗಿದ್ದಾರೆ’ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.