ADVERTISEMENT

ಎನ್‌ಕೌಂಟರ್‌ಗೆ ಮೂವರು ಉಗ್ರರು ಬಲಿ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2019, 18:23 IST
Last Updated 3 ಆಗಸ್ಟ್ 2019, 18:23 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಹಾಗೂ ಶೋಪಿಯಾನ್‌ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳಿಸಿವೆ.

ಉಗ್ರರು ಅಡಗಿದ್ದಾರೆ ಎಂಬ ಅಧಿಕೃತ ಮಾಹಿತಿ ಮೇರೆಗೆ ಶನಿವಾರ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಜೈಷ್‌ ಎ ಮೊಹಮ್ಮದ್‌ (ಜೆಇಎಂ) ಸಂಘಟನೆಯ ಇಬ್ಬರು ಉಗ್ರರನ್ನು ಬಾರಾಮುಲ್ಲಾದ ಸಪೋರ್‌ ಪಟ್ಟಣದಲ್ಲಿ ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶೋಪಿಯಾನ್‌ ಜಿಲ್ಲೆಯಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ಜೆಇಎಂ ಉಗ್ರ ಮಂಜೂರ್‌ ಭಟ್‌ ಹತನಾಗಿದ್ದಾನೆ. ಶುಕ್ರವಾರ ಸಹ ಜೆಇಎಂ ಉಗ್ರ ಝೀನತ್‌ ಉಲ್‌ ಇಸ್ಲಾಂ ನಾಯ್ಕೂ ಎಂಬಾತನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದವು. ಈ ಇಬ್ಬರು ಉಗ್ರರು ಅನೇಕ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.