ಶ್ರೀನಗರ: ಭದ್ರತಾ ಪಡೆಗಳು ಕಳೆದ 24 ಗಂಟೆಗಳಲ್ಲಿ ಉಗ್ರರ ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿವೆ.
ಬಾರಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎರಡು ಕಡೆ ನಡೆಸಿದ ಪ್ರತ್ಯೇಕ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿವೆ.
ಉಗ್ರರು ಇರುವ ಖಚಿತ ಮಾಹಿತಿ ಪಡೆದು ಈ ದಾಳಿ ಮಾಡಲಾಯಿತು ಎಂದು ಸೇನಾ ವಕ್ತಾರರು ಹೇಳಿದ್ದಾರೆ. ಮೃತ ಉಗ್ರರು ಯಾವ ಸಂಘಟನೆಗೆ ಸೇರಿದವರು ಎಂಬುದನ್ನು ಭದ್ರತಾ ಪಡೆಗಳು ಬಹಿರಂಗಪಡಿಸಿಲ್ಲ.
ಉಗ್ರರ ಬಳಿ ಇದ್ದ ಮದ್ದು ಗುಂಡುಗಳು. ರೈಫಲ್ಗಳು ಹಾಗೂ ಎ.ಕೆ.47 ಗನ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.