ನವದೆಹಲಿ: 2020ರಲ್ಲಿ ದೆಹಲಿ ಈಶಾನ್ಯ ಭಾಗದ ಭಾಗೀರಥಿ ವಿಹಾರ್ದಲ್ಲಿ ಗಲಭೆ, ವಿಧ್ವಂಸಕ ಕೃತ್ಯ, ಬೆಂಕಿ ಹಚ್ಚುವುದು ಹಾಗೂ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಗುಂಪಿನ ನಾಲ್ವರು ಆರೋಪಿಗಳನ್ನು ಇಲ್ಲಿನ ನ್ಯಾಯಾಲಯವು ಇತ್ತೀಚೆಗೆ ಖುಲಾಸೆಗೊಳಿಸಿದೆ.
2020ರ ಫೆ. 25ರಂದು ದೆಹಲಿಯ ಈಶಾನ್ಯ ಭಾಗದಲ್ಲಿನ ಕೆಲವು ಅಂಗಡಿಗಳನ್ನು ಲೂಟಿ ಮಾಡಿ, ಬೆಂಕಿ ಹಚ್ಚಿದ ಗುಂಪಿನ ಆರೋಪಿಗಳಾದ ದಿನೇಶ್ ಯಾದವ್, ಸಾಹಿಲ್, ಸಂದೀಪ್ ಮತ್ತು ಟಿಂಕು ಎಂಬುವರ ವಿರುದ್ಧದ ಪ್ರಕರಣವನ್ನು ಇಲ್ಲಿನ ನ್ಯಾಯಾಲಯವು ವಿಚಾರಣೆಗೆ ಕೈಗೆತ್ತಿಕೊಂಡಿದೆ.
‘ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಹೊರಿಸಲಾದ ಆರೋಪಗಳು ಸಾಬೀತಾಗಿಲ್ಲ. ಆದ್ದರಿಂದ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಹೊರಿಸಲಾದ ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ’ ಎಂದು ಹೆಚ್ಚುವರಿ ಸೆಷೆನ್ಸ್ ನ್ಯಾಯಾಧೀಶ ಪುಲಸ್ತ್ರ್ಯ ಪ್ರಮಾಚಲ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.