ADVERTISEMENT

ಉಕ್ರೇನ್‌ನಿಂದ ತಾಯ್ನಾಡಿಗೆ ಬರುತ್ತಿದ್ದಾರೆ 219 ಭಾರತೀಯರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಫೆಬ್ರುವರಿ 2022, 10:49 IST
Last Updated 26 ಫೆಬ್ರುವರಿ 2022, 10:49 IST
ತಾಯ್ನಾಡಿಗೆ ಪ್ರಯಾಣ ಕೈಗೊಂಡಿರುವ ಭಾರತೀಯರು
ತಾಯ್ನಾಡಿಗೆ ಪ್ರಯಾಣ ಕೈಗೊಂಡಿರುವ ಭಾರತೀಯರು    

ನವದೆಹಲಿ: ಯುದ್ಧ ಪೀಡಿತ ಉಕ್ರೇನ್‌ನಿಂದ ರೊಮೇನಿಯಾಕ್ಕೆ ಸ್ಥಳಾಂತರಗೊಂಡಿದ್ದ ಭಾರತೀಯ ಪ್ರಜೆಗಳು ಅಲ್ಲಿಂದ ಮುಂಬೈಗೆ ವಿಮಾನದಲ್ಲಿ ಹೊರಟಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.

ಅವರೆಲ್ಲರೂ ವಿಮಾನದ ಮೂಲಕ ಪ್ರಯಾಣ ಕೈಗೊಂಡಿರುವ ಚಿತ್ರಗಳನ್ನು ಜೈಶಂಕರ್‌ ಸಾಮಾಜಿಕ ಮಾಧ್ಯಮಗಳಲ್ಲಿ ಶನಿವಾರ ಹಂಚಿಕೊಂಡಿದ್ದಾರೆ.

‘ನಮ್ಮ ತಂಡಗಳು ಹಗಲಿರುಳೂ ಕೆಲಸ ಮಾಡುತ್ತಿವೆ. ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯ ಪ್ರಗತಿಯಲ್ಲಿದೆ. ನಾನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇನೆ‘ ಎಂದು ಅವರು ಹೇಳಿದ್ದಾರೆ.

ADVERTISEMENT

219 ಮಂದಿಯನ್ನು ಹೊತ್ತ ವಿಮಾನವು ಸಂಜೆ 4 ಗಂಟೆಗೆ ಭಾರತಕ್ಕೆ ಬಂದಿಳಿಯಲಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.