ADVERTISEMENT

24 ಮೀನುಗಾರರನ್ನು ಬಿಡುಗಡೆ ಮಾಡಿದ ಶ್ರೀಲಂಕಾ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2014, 19:30 IST
Last Updated 13 ಮಾರ್ಚ್ 2014, 19:30 IST

ರಾಮೇಶ್ವರಂ(ಪಿಟಿಐ): ಭಾರತ ಮತ್ತು ಶ್ರೀಲಂಕಾದ ನಡುವೆ ಇರುವ ಮೀನು­ಗಾರರ ಸಮಸ್ಯೆಯನ್ನು ಇತ್ಯರ್ಥಗೊಳಿಸ­ಬೇಕು ಎಂದು ಚರ್ಚೆ ನಡೆಯುತ್ತಿರುವ ವೇಳೆ ಶ್ರೀಲಂಕಾದ ನ್ಯಾಯಾಲಯ­ವೊಂದು 116 ಮೀನು­­ಗಾರರನ್ನು ಬಿಡುಗಡೆ ಮಾಡಿದ ಒಂದು ದಿನದ ನಂತರ ಶ್ರೀಲಂಕಾದ ಮನ್ನಾರ್‌ ನ್ಯಾಯಾ­ಲಯ ಭಾರತದ 24 ಮೀನುಗಾ­ರರನ್ನು ಗುರುವಾರ ಬಿಡುಗಡೆ ಮಾಡಿದೆ.

ವಿಶ್ವ ಕಡಲ ಗಡಿಯನ್ನು ಅಕ್ರಮ­ವಾಗಿ ದಾಟಿದ ಆರೋಪದ ಮೇಲೆ ಶ್ರೀಲಂಕಾ ನೌಕಾ ಸೇನೆಯವರು ಮೀನುಗಾರ­ರನ್ನು ಬಂಧಿಸಿದ್ದರು.
‘ಶ್ರೀಲಂಕಾದ ಜೈಲುಗಳಲ್ಲಿ ಬಂಧಿತ­ವಾಗಿರುವ 32 ಭಾರತೀಯ ಮೀನು­ಗಾರ­ರನ್ನು ಬಿಡುಗಡೆ ಮಾಡಬೇಕಿದೆ’ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.