ADVERTISEMENT

ಕೇಂದ್ರೀಯ ವಿವಿಗಳಲ್ಲಿ 5 ವರ್ಷದಲ್ಲಿ 24 ವಿದ್ಯಾರ್ಥಿಗಳ ಆತ್ಮಹತ್ಯೆ

ಪಿಟಿಐ
Published 4 ಏಪ್ರಿಲ್ 2022, 11:36 IST
Last Updated 4 ಏಪ್ರಿಲ್ 2022, 11:36 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯಗಳ 24 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ರಾಜ್‌ಕುಮಾರ್‌ ರಂಜನ್‌ ಸಿಂಗ್‌ ಸೋಮವಾರ ಲೋಕಸಭೆಗೆ ತಿಳಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಅವರು, ‘ವಿದ್ಯಾರ್ಥಿಗಳ ಮೇಲಾಗುವ ಕಿರುಕುಳ ಮತ್ತು ತಾರತಮ್ಯದ ವಿಚಾರವಾಗಿ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಅಧ್ಯಯನ ನಡೆಸಿದೆ.ವಿದ್ಯಾರ್ಥಿಗಳು ಶೈಕ್ಷಣಿಕ ಒತ್ತಡದಿಂದ ಹೊರಬರಲು ಶಿಕ್ಷಣ ಸಚಿವಾಲಯವು ಪ್ರಾದೇಶಿಕ ಭಾಷೆಗಳಲ್ಲಿ ಆಪ್ತ ಸಮಾಲೋಚನೆ, ತಾಂತ್ರಿಕ ಶಿಕ್ಷಣದಂತಹ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೋವಿಡ್‌ ಸಂದಿಗ್ಧ ಕಾಲದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಕುಟುಂಬದ ಮಾನಸಿಕ ಸದೃಢತೆಗಾಗಿ ಕೇಂದ್ರ ಸರ್ಕಾರವು ಮನೋದರ್ಪಣ ಹೆಸರಿನ ಯೋಜನೆ ಮೂಲಕ ಹಲವು ಚಟುವಟಿಕೆಗಳನ್ನು ಕೈಗೊಂಡಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT