ನವದೆಹಲಿ: ಮುಂಬೈ ಮೇಲಿನ 26/11ರ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಹಾಗೂ ಮೃತಪಟ್ಟವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಶ್ರದ್ಧಾಂಜಲಿ ಸಲ್ಲಿಸಿದರು.
‘ತಮ್ಮ ಪ್ರಾಣ ಪಣಕ್ಕಿಟ್ಟು, ಉಗ್ರರ ವಿರುದ್ಧ ಹೋರಾಡಿದ ಹಾಗೂ ಹುತಾತ್ಮರಾದ ಯೋಧರ ಧೈರ್ಯ–ಸಾಹಸಕ್ಕೆ ದೇಶ ಸದಾ ಕೃತಜ್ಞವಾಗಿರುತ್ತದೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ರಾಹುಲ್ಗಾಂಧಿಯಿಂದ ಗೌರವ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಸಹ ಮುಂಬೈ ಮೇಲಿನ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಹುತಾತ್ಮ ಯೋಧರ ಭಾವಚಿತ್ರಗಳಿರುವ ಎರಡು ನಿಮಿಷದ ವಿಡಿಯೊವೊಂದನ್ನು ಅವರು ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ‘26/11 ಮುಂಬೈ ಭಯೋತ್ಪಾದಕ ದಾಳಿ ಘಟನೆಯ ಹೀರೊಗಳಿಗೆ ವಂದನೆಗಳು’ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.