ಹೈದರಾಬಾದ್: ನಿಜಾಮಾಬಾದ್ ಜಿಲ್ಲೆಯ ಬನಸವಾಡದಲ್ಲಿ ಇದೇ 13ರಂದು ಉಪಚುನಾವಣೆ ಇರುವುದರಿಂದ ತೆಲಂಗಾಣ ಜಂಟಿ ಕ್ರಿಯಾ ಸಮಿತಿಯು ಉದ್ದೇಶಿತ ಮೂರು ದಿನಗಳ ರೈಲು ತಡೆಯನ್ನು ಇದೇ 12ರ ಬದಲಿಗೆ 15ರಿಂದ ಆರಂಭಿಸಲು ನಿರ್ಧರಿಸಿದೆ.
ರೈಲು ತಡೆ ಹಿನ್ನೆಲೆಯಲ್ಲಿ ಈ ಮೊದಲು ದಕ್ಷಿಣ ಕೇಂದ್ರೀಯ ರೈಲ್ವೆ ಬದಲಿ ಮಾರ್ಗಗಳ ವ್ಯವಸ್ಥೆ ಮಾಡಿತ್ತು. ಇದೀಗ ರೈಲು ತಡೆ ಮುಂದಕ್ಕೆ ಹೋಗಿರುವುದರಿಂದ ಈ ವ್ಯವಸ್ಥೆಯನ್ನು ರದ್ದು ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.