ಮುಜಾಫರ್ನಗರ: ಬೆಲ್ಲ ತಯಾರಿಕೆಗೆ ಉರುವಲಾಗಿ ಪ್ಲಾಸ್ಟಿಕ್ ತ್ಯಾಜ್ಯ ಬಳಸುತ್ತಿದ್ದ ಆರೋಪದ ಮೇಲೆ ಇಲ್ಲಿನ ಭೋಕಹೇರಿ ಗ್ರಾಮದ ಮೂವರನ್ನು ಭೋಪಾ ಠಾಣೆಯ ಪೊಲೀಸರು ಗುರುವಾರ ಬಂಧಿಸಿದ್ದಾರೆ.
‘ಗ್ರಾಮದ ಬೆಲ್ಲ ಉತ್ಪಾದನಾ ಘಟಕದ (ಆಲೆಮನೆ) ಮೇಲೆ ದಾಳಿ ನಡೆಸಿ ಮೂವರನ್ನು ಬಂಧಿಸಲಾಯಿತು’ ಎಂದು ಠಾಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.
ಈ ಮೂವರು ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತಪ್ಪಿಸಿಕೊಂಡಿರುವ ಇಬ್ಬರ ಬಂಧನಕ್ಕೆ ಬಲೆ ಬೀಸಲಾಗಿದೆ. ಪ್ಲಾಸ್ಟಿಕ್ ತ್ಯಾಜ್ಯ ಇದ್ದ ಎರಡು ಲೋಡ್ ಟ್ರಾಕ್ಟರ್ ಟ್ರಾಲಿಗಳನ್ನು ಸ್ಥಳದಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.