ADVERTISEMENT

ಮಹಾತ್ಮನ ಪ್ರತಿಕೃತಿಗೆ ಗುಂಡು: ಮೂವರ ಬಂಧನ, 13 ಮಂದಿ ವಿರುದ್ಧ ಎಫ್‌ಐಆರ್

ಪಿಟಿಐ
Published 31 ಜನವರಿ 2019, 18:25 IST
Last Updated 31 ಜನವರಿ 2019, 18:25 IST
ಮಹಾತ್ಮ ಗಾಂಧಿ ಹತ್ಯೆ ಘಟನೆ ಮರುಸೃಷ್ಟಿಸಿ ಸಂಭ್ರಮಾಚರಿಸಿದ ಹಿಂದೂ ಮಹಾಸಭಾ ನಾಯಕಿ
ಮಹಾತ್ಮ ಗಾಂಧಿ ಹತ್ಯೆ ಘಟನೆ ಮರುಸೃಷ್ಟಿಸಿ ಸಂಭ್ರಮಾಚರಿಸಿದ ಹಿಂದೂ ಮಹಾಸಭಾ ನಾಯಕಿ   

ಅಲಿಗಡ: ಮಹಾತ್ಮ ಗಾಂಧಿ ಪ್ರತಿಕೃತಿಗೆ ಗುಂಡು ಹಾರಿಸಿ ವಿಕೃತಿ ಮೆರೆದಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶದ ಅಲಿಗಡದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ಪೂಜಾ ಶಕುನ್ ಪಾಂಡೆ ನಕಲಿ ಪಿಸ್ತೂಲ್‌ನಿಂದ ಗಾಂಧಿ ಪ್ರತಿಕೃತಿಗೆ ಗುಂಡಿಕ್ಕಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.‌

ಗಾಂಧಿ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯ ನೌರಂಗಬಾದ್‌ನಲ್ಲಿರುವ ಹಿಂದೂ ಮಹಾಸಭಾ ಕಚೇರಿ ಹೊರ ಭಾಗದಲ್ಲಿ ಈ ಕೃತ್ಯ ನಡೆದಿತ್ತು’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು.

ಪೂಜಾ ಸೇರಿ 13 ಮಂದಿಯ ವಿರುದ್ಧ ಮೊಕದ್ದಮೆ ದಾಖಲಿಸಿಕೊಳ್ಳಲಾಗಿದ್ದು, ಪೂಜಾ ತಲೆಮರೆಸಿಕೊಂಡಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲ ಆರೋಪಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.