ವಿಶಾಖಪಟ್ಟಣಂ: ಇಲ್ಲಿನ ಯರಾಡ ಕರಾವಳಿ ಪ್ರದೇಶಲ್ಲಿ ನಾಪತ್ತೆಯಾಗಿದ್ದ ನಾಲ್ಕು ಜನರಲ್ಲಿ ಮೂವರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನೊಬ್ಬ ವ್ಯಕ್ತಿಯ ಸುಳಿವು ಈವರೆಗೆ ಲಭ್ಯವಾಗಿಲ್ಲ. ಅವರನ್ನು ಪೆದ್ದ ಗಂಟ್ಯಾಡದ ಸಂತೋಷ್ ಎಂದು ಗುರುತಿಸಲಾಗಿದೆ.
ಪೊಲೀಸರು ಹಾಗೂ ಸಾಗರ ಮುಳುಗು ತಜ್ಞರು ಹುಡುಕು ಕಾರ್ಯಾಚರಣೆ ಆರಂಭಿಸಿದ್ದರು. ಕಾರ್ಯಾಚರಣೆ ಮುಂದುವರಿದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.