ADVERTISEMENT

ಲಖಿಂಪುರ ಹಿಂಸಾಚಾರ ಪ್ರಕರಣ: ಮತ್ತೆ ಮೂವರ ಬಂಧನ

ಪಿಟಿಐ
Published 23 ಅಕ್ಟೋಬರ್ 2021, 11:40 IST
Last Updated 23 ಅಕ್ಟೋಬರ್ 2021, 11:40 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಲಖಿಂಪುರ ಖೇರಿ (ಉತ್ತರ ಪ್ರದೇಶ): ಲಖಿಂಪುರ ಖೇರಿಯಲ್ಲಿ ಅ.3ರಂದು ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ ಇದೀಗ 13ಕ್ಕೆ ಏರಿದಂತಾಗಿದೆ. ಬಂಧಿತರಲ್ಲಿ ಕೇಂದ್ರ ಗೃಹಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಪುತ್ರ ಆಶೀಶ್ ಮಿಶ್ರಾ ಸಹ ಸೇರಿದ್ದಾರೆ.

ಬಂಧಿತರನ್ನು ಸಿಂಗಾಹಿ ಪಟ್ಟಣದ ಮೋಹಿತ್ ತ್ರಿವೇದಿ, ಬರ್ಸೊಲಾ ಕಲಾನ್‌ನ ರಂಕು ರಾಣಾ ಮತ್ತು ಟಿಕೊನಿಯಾ ಕೊಟ್ಮಾಲಿ ಠಾಣಾ ವ್ಯಾಪ್ತಿಯಲ್ಲಿರುವ ಚಿಮ್ಮ ತಾಂಡದ ಧರ್ಮೇಂದ್ರ ಎಂದು ಗುರುತಿಸಲಾಗಿದೆ.

ADVERTISEMENT

ಪೊಲೀಸ್ ಕಸ್ಟಡಿಯಲ್ಲಿರುವ ಇತರ ಆರೋಪಿಗಳು ವಿಚಾರಣೆಯ ಸಮಯದಲ್ಲಿ ಈ ಮೂವರ ಹೆಸರನ್ನು ಹೇಳಿದ್ದರು. ಅದನ್ನು ಆಧರಿಸಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.