ADVERTISEMENT

ಕಾನ್ಪುರ ದಾಳಿ ಘಟನೆ: ಮೂವರು ಪೊಲೀಸ್‌ ಸಿಬ್ಬಂದಿ ಅಮಾನತು

ಪಿಟಿಐ
Published 6 ಜುಲೈ 2020, 8:50 IST
Last Updated 6 ಜುಲೈ 2020, 8:50 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಕಾನ್ಪುರ: ‘ನಗರದಲ್ಲಿ ಕೆಲವು ದಿನಗಳ ಹಿಂದೆ ನಡೆದ, ಎಂಟು ಮಂದಿ ಪೊಲೀಸರ ಹತ್ಯೆಯ ಘಟನೆಗೆ ಸಂಬಂಧಿಸಿದಂತೆ, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಇಬ್ಬರು ಸಬ್‌ ಇನ್‌ಸ್ಪೆಕ್ಟರ್‌ ಹಾಗೂ ಒಬ್ಬ ಕಾನ್‌ಸ್ಟೆಬಲ್‌ ಅವರನ್ನು ಅಮಾನತುಗೊಳಿಸಲಾಗಿದೆ’ ಎಂದು ಎಸ್‌ಎಸ್‌ಪಿ ದಿನೇಶ್ ಕುಮಾರ್‌ ತಿಳಿಸಿದ್ದಾರೆ.

‘ಚೌಬೆಪುರ ಪೊಲೀಸ್‌ ಠಾಣೆಯ ಅಮಾನತುಗೊಂಡಿರುವ ಈ ಸಿಬ್ಬಂದಿ ವಿರುದ್ಧ ಪ್ರಾಥಮಿಕ ತನಿಖೆ ಆರಂಭಿಸಲಾಗಿದೆ. ಇವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗುವುದು. ಘಟನೆಯಲ್ಲಿ ಇವರ ಕೈವಾಡವಿರುವುದು ಸಾಬೀತಾದರೆ ಕಠಿಣ ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ’ ಎಂದು ಅವರು ಹೇಳಿದ್ದಾರೆ.

ಬಹುಮಾನ ಹೆಚ್ಚಳ: ಎಂಟು ಮಂದಿ ಪೊಲೀಸರ ಹತ್ಯೆಯ ಆರೋಪಿ ವಿಕಾಸ್‌ ದುಬೆಯನ್ನು ಬಂಧಿಸಿದವರಿಗೆ ನೀಡುವ ಬಹುಮಾನದ ಮೊತ್ತವನ್ನು ₹2.50 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಡಿಜಿಪಿ ಎಚ್‌.ಸಿ. ಅವಸ್ಥಿ ಹೇಳಿದ್ದಾರೆ. ಈ ಹಿಂದೆ ₹1ಲಕ್ಷ ಬಹುಮಾನ ಘೋಷಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.