ADVERTISEMENT

ಕೇರಳದಲ್ಲಿ ಪಿಎಫ್‌ಐ ನಾಯಕನ ಹತ್ಯೆ: ಆರ್‌ಎಸ್‌ಎಸ್‌ನ ಮೂವರು ಕಾರ್ಯಕರ್ತರ ಬಂಧನ

ಪಿಟಿಐ
Published 19 ಏಪ್ರಿಲ್ 2022, 11:16 IST
Last Updated 19 ಏಪ್ರಿಲ್ 2022, 11:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಪಾಲಕ್ಕಾಡ್‌ (ಪಿಟಿಐ): ಕೇರಳದ ಪಾಲಕ್ಕಾಡ್‌ನಲ್ಲಿ ನಡೆದ ಪೀಪಲ್‌ ಫ್ರಂಟ್‌ ಆಫ್‌ ಇಂಡಿಯಾದ ನಾಯಕ ಸುಬೈರ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮೂವರು ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ವಿಜಯ್‌ ಸಾಖರೆ, ‘ರಮೇಶ್‌, ಆರುಮುಗನ್‌ ಹಾಗೂ ಸರವಣನ್ ಬಂಧಿತ ಆರೋಪಿಗಳಾಗಿದ್ದು, ಇವರು ನವೆಂಬರ್‌ನಲ್ಲಿ ಹತ್ಯೆಗೀಡಾದ ಆರ್‌ಎಸ್‌ಎಸ್‌ ಕಾರ್ಯಕರ್ತ ಸಂಜಿತ್‌ ಅವರ ಸ್ನೇಹಿತರು. ಸಂಜಿತ್‌ ಕೊಲೆಗೆ ಸೇಡು ತೀರಿಸಿಕೊಳ್ಳಲು, ಈ ಮೂವರು ಪಿಎಫ್‌ಐ ನಾಯಕ ಸುಬೈರ್‌ನನ್ನು ಹತ್ಯೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಆದರೆ, ಸಂಜಿತ್‌ ಕೊಲೆ ಪ್ರಕರಣದಲ್ಲಿ ಸುಬೈರ್‌ನ ಪಾತ್ರವಿದೆ ಎಂಬುದು ಖಚಿತವಾಗಿಲ್ಲ’ ಎಂದು ಹೇಳಿದರು.

‘ರಮೇಶ್‌ ಹಾಗೂ ಅವರ ಸ್ನೇಹಿತರು, ಸುಬೈರ್‌ ಕೊಲ್ಲಲು ಎರಡು ಬಾರಿ ಪ್ರಯತ್ನಿಸಿ ಸೋತಿದ್ದರು. ಆದರೆ, ಮೂರನೇ ಬಾರಿ ಬಾರಿ ಅವಕಾಶ ಸಿಕ್ಕ ಕೂಡಲೇ ಕೊಲೆ ಮಾಡಿದ್ದರು. ಈ ಹತ್ಯೆ ಪ್ರಕರಣದಲ್ಲಿ ಬೇರೆಯವರು ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ’ ಎಂದು ಸಾಖರೆ ತಿಳಿಸಿದರು.‌

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.