ADVERTISEMENT

ಉತ್ತರ ಪ್ರದೇಶ: ಕಲ್ಲಿನಿಂದ ಹೊಡೆದು ರೈತನ ಹತ್ಯೆ

ಪಿಟಿಐ
Published 20 ಮಾರ್ಚ್ 2021, 6:12 IST
Last Updated 20 ಮಾರ್ಚ್ 2021, 6:12 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮುಜಾಫ್ಫರ್‌ನಗರ: ಉತ್ತರಪ್ರದೇಶದಲ್ಲಿ 30 ವರ್ಷದ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಶುಕ್ರವಾರ ಕಲ್ಲಿನಿಂದ ಹೊಡೆದು ಹತ್ಯೆ ಮಾಡಿದ್ದಾರೆ.

‘ಈ ಘಟನೆ ಶುಕ್ರವಾರ ಸಂಜೆ ನಡೆದಿದೆ. ಅನುಜ್‌ ಕುಮಾರ್‌ ಎಂಬ ರೈತ,ಕಜಿಕೇಡಾ ಗ್ರಾಮದಲ್ಲಿರುವ ತನ್ನ ಹೊಲಕ್ಕೆ ಹೋಗಿದ್ದಾಗ ದುಷ್ಕರ್ಮಿಗಳು ಅವರನ್ನು ಕಲ್ಲಿನಿಂದ ಹೊಡೆದು ಕೊಂದಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

‘ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಅನುಜ್‌ ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ’ ಎಂದು ತಿತಾವಿ ಠಾಣೆಯ ಹಿರಿಯ ಪೊಲೀಸ್‌ ಅಧಿಕಾರಿ ರಾಧೆಶಾಮ್‌ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.